ಸಂಜೀವಿನಿ- ಆರೋಗ್ಯ ಮಾರ್ಗದರ್ಶಿ ಬಿಡುಗಡೆ

ಜುಲೈ 3ರಂದು ಮಂಗಳೂರಿನ ಓಷನ್‍ಪರ್ಲ್ ಹೋಟೆಲಿನ ಸಭಾಂಗಣದಲ್ಲಿ ಹಿರಿಯ ದಂತ ವೈದ್ಯ ಮತ್ತು ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕ ಡಾ|| ಮುರಲೀ ಮೋಹನ್ ಚೂಂತಾರು ಇವರ ಆರನೇ ವೈದ್ಯಕೀಯ ಕೃತಿ  “ಸಂಜೀವಿನಿ ಆರೋಗ್ಯ ಮಾರ್ಗದರ್ಶಿ” ಭಾಗ ಎರಡು ಲೋಕಾರ್ಪಣೆಗೊಂಡಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಚಿವರಾದ ಬಿ. ರಮಾನಾಥ ರೈ ಇವರು ಕೃತಿಯನ್ನು ಬಿಡುಗಡೆ ಮಾಡಿದರು. ಸುರಕ್ಷಾ ದಂತ ಚಿಕಿತ್ಸಾಲಯ ಹೊಸಂಗಡಿ ಇದರ ವಿಂಶತಿಯ ಸಂಭ್ರಮದ ಜೊತೆಗೆ ನಡೆದ ಈ ಕಾರ್ಯಕ್ರಮದಲ್ಲಿ ಖ್ಯಾತ ಕುಟುಂಬ ವೈದ್ಯ ಮತ್ತು ವೈದ್ಯ ಸಾಹಿತಿ ಡಾ|| ರಮಾನಂದ ಬನರಿ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿ ಇದರ ಅಧ್ಯಕ್ಷರಾದ ಹರ್ಷದ್ ವರ್ಕಾಡಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಚೂಂತಾರು ಪ್ರತಿಷ್ಠಾನದ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಡಾ| ರಾಜಶ್ರೀ ಮೋಹನ್, ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗ್ಗಡೆ, ವೈದ್ಯ ಸಾಹಿತಿ ಡಾ| ಮೀರಾ, ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಚಂದ್ರಪ್ರÀಕಾಶ್ ಶೆಟ್ಟಿ ತುಂಬೆ ಮುಂತಾದವರು ಉಪಸ್ಥಿತರಿದ್ದರು.
Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!