Vydyaloka

ಡಯಾಬಿಟಿಸ್ ತಪ್ಪು ಕಲ್ಪನೆಗಳು ಮತ್ತು ವಾಸ್ತವ

ಡಯಾಬಿಟಿಸ್ ಬಗ್ಗೆ ಜನಸಾಮಾನ್ಯರಲ್ಲಿರುವ ತಪ್ಪು ಗ್ರಹಿಕೆಯು ಆ ರೋಗದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸಲು ತೊಡಕಾಗಿ ಪರಿಣಮಿಸಿದೆ. ಮಧುಮೇಹ ರೋಗದ ಬಗ್ಗೆ ಜನರಲ್ಲಿರುವ ತಪ್ಪು ಗ್ರಹಿಕೆಯನ್ನು ಹೋಗಲಾಡಿಸಲು ಕೆಲವು ವಾಸ್ತವ ಸಂಗತಿಗಳನ್ನು ಇಲ್ಲಿ ನೀಡಲಾಗಿದೆ.
‘ಸೈಲೆಂಟ್ ಕಿಲ್ಲರ್’ ಎಂದೇ ಕರೆಯಲ್ಪಡುವ ಸಕ್ಕರೆ ಕಾಯಿಲೆ ಆಥವಾ ಮಧುಮೇಹ ಅಥವಾ ಡಯಾಬಿಟಿಸ್ ರೋಗ ಭಾರತದಲ್ಲಿ ಸಾಂಕ್ರಾಮಿಕ ರೋಗದಂತೆ ಹಬ್ಬುತ್ತಿದೆ. ಇದರಿಂದ ದೇಶದ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ. ಭಾರತದಲ್ಲಿ ಟೈಪ್-2 ಡಯಾಬಿಟಿಸ್ ತೀವ್ರವಾಗಿದ್ದು, ಇದರಿಂದ ಹೃದ್ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಟೈಪ್-2 ಡಯಾಬಿಟಿಸ್‍ನಲ್ಲಿ ದೇಹದ ಬೆಳವಣಿಗೆಗಾಗಿ ಬಳಕೆಯಾಗುವ ಗ್ಲುಕೋಸ್ ಅಥವಾ ಸಕ್ಕರೆ, ರಕ್ತದಲ್ಲಿ ಸಂಗ್ರಹಗೊಳ್ಳುತ್ತದೆ. ಬೊಜ್ಜು ದೇಹ ಹಾಗೂ ಬದಲಾದ ಜೀವನಶೈಲಿಯೇ ಈ ರೀತಿಯ ಡಯಾಬಿಟಿಸ್ ಅಂಟಿಕೊಳ್ಳಲು ಕಾರಣವಾಗುತ್ತದೆ.
ವಿಶ್ವದಲ್ಲೇ ಅತಿ ಹೆಚ್ಚು ಸಕ್ಕರೆ ಕಾಯಿಲೆಯ ರೋಗಿಗಳನ್ನು ಹೊಂದಿರುವ ದೇಶ ಭಾರತ. ಈ ಸಂಖ್ಯೆ ತೀವ್ರ ಗತಿಯಲ್ಲಿ ಹೆಚ್ಚಾಗುತ್ತಲೇ ಇದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಧುಮೇಹ ಒಕ್ಕೂಟ ‘ಮಧುಮೇಹ’ವು ಸಾಂಕ್ರಾಮಿಕ ರೋಗದಂತೆ ವ್ಯಾಪಕವಾಗಿ ಹಬ್ಬುತ್ತಿರುವ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿದೆ.
ಭಾರತೀಯರು ಸೂಕ್ಷ್ಮ ದೇಹದವರು. ಎಷ್ಟು ಸೂಕ್ಷ್ಮ ಎಂದರೆ ಆಹಾರ ಸೇವನೆಯಲ್ಲಿ ಅಲ್ಪಸ್ವಲ್ಪ ಬದಲಾವಣೆಯಾದರೂ, ದೇಹದ ತೂಕ ಹೆಚ್ಚಾಗುತ್ತದೆ. ತೂಕ ಹೆಚ್ಚಾದರೆ ದೇಹದಲ್ಲಿನ ಚಟುವಟಿಕೆಗಳು ಏರುಪೇರಾಗುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಮತ್ತು ಕೊಬ್ಬು ಅಂಶ ಅಧಿಕವಾಗುತ್ತದೆ. ಇದು ಬೊಜ್ಜು ರೋಗಕ್ಕೆ ಪ್ರಮುಖ ಕಾರಣ. ಒಮ್ಮೆ ದೇಹದ ತೂಕ ಹೆಚ್ಚಿಸಿಕೊಂಡರೆ ಅಥವಾ ಬೊಜ್ಜು ಬೆಳೆಸಿಕೊಂಡರೆ ಅದು ಮಧುಮೇಹ ಅಮರಿಕೊಳ್ಳುವುದಕ್ಕೆ ಪ್ರಮುಖ ಕಾರಣ. ಆದ್ದರಿಂದ ಆಹಾರ ಸೇವನೆಯಲ್ಲಿ ಎಚ್ಚರ ವಹಿಸಬೇಕು.

ಡಾ.ದಿನಕರ್
ವೈದೇಹಿ ಹಾಸ್ಪಿಟಲ್, ವೈದೇಹಿ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್, 82, ಇಪಿಐಪಿ ವೈಟ್‌ಫೀಲ್ಡ್, ಬೆಂಗಳೂರು -560066
ಫೋನ್ : 080-28413381/2/3/4      ಮೊ.: 97422 74849

Share this: