ಮುನಿಯಾಲು ಆಯುರ್ವೇದದಿಂದ ಔಷಧೀಯ ಸಸ್ಯಗಳ ಉಚಿತ ವಿತರಣೆ

ಮುನಿಯಾಲು ಆಯುರ್ವೇದದಿಂದ ರೋಗನಿರೋಧಕ ಶಕ್ತಿವರ್ಧನೆಯ ಔಷಧೀಯ ಸಸ್ಯಗಳ ಉಚಿತ ವಿತರಣೆ.

Muniyalayurvedaಮಣಿಪಾಲ: ತಾರೀಖು ಜುಲೈ 6ನೇ ಸೊಮವಾರ ಗುರುಪೂರ್ಣಿಮೆ ಹಾಗೂ ವನಮಹೋತ್ಸವ ಸಪ್ತಾಹದ ಅಂಗವಾಗಿ ಪ್ರತಿ ವರ್ಷದಂತೆ ಮಣಿಪಾಲದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಆಸಕ್ತ ಸಾರ್ವಜನಿಕರಿಗೆ ವಿವಿಧ ಜಾತಿಯ ರೋಗ ನಿರೋಧಕ ಔಷಧೀಯ ಗುಣಗಳುಳ್ಳ ಮರ, ಗಿಡ, ಬಳ್ಳಿಗಳ ಸಸಿಗಳನ್ನು ಉಚಿತವಾಗಿ ಲಭ್ಯವಿದ್ದು ಕೋವಿಡ್ 19ರ ಪ್ರಯುಕ್ತ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ವಿತರಿಸಲಾಗುತ್ತದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟನೆ ತಿಳಿಸಿದೆ.

ಅಂದು ಮುಂಜಾನೆ 9 ಗಂಟೆಯಿಂದ ಸಂಜೆ 4ರ ತನಕ ಉಚಿತವಾಗಿ ಮರಗಳಾದ ಪೇರಳೆ, ಬಿಲ್ವಪತ್ರೆ, ಕಹಿಬೇವು, ನೆಲ್ಲಿ, ಕಾಡು ಬಾದಾಮಿ, ಪುನರ್ಪುಳಿ, ಹೊಂಗೆ, ನೇರಳೆ, ತಾರೆಕಾಯಿ, ನೊರೆಕಾಯಿ, ಹಾಗೂ ಬಳ್ಳಿ ಮತ್ತು ಗಿಡಗಳಾದ ಹಿಪ್ಪಲಿ, ಅಮೃತ ಬಳ್ಳಿ, ಸಂಧಿಬೀಳು, ಕಾಳುಮೆಣಸು ಮತ್ತು ಇತರ ಸಸಿಗಳನ್ನು ಮೊದಲು ಬಂದವರಿಗೆ ಆದ್ಯತೆ ಮೇರೆಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟನೆ ಕೋರಿದೆ.

Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!