ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು. ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಈ ಶಿಬಿರ ನಡೆಯಿತು ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.
ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಜಿಲ್ಲಾ ಗೃಹರಕ್ಷಕ ದಳದ ಇವರ ಸಹಯೋಗದಲ್ಲಿ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಈ ಶಿಬಿರ ಜರುಗಿತು.